Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:21 - ಕನ್ನಡ ಸತ್ಯವೇದವು J.V. (BSI)

21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಸಗ್ಳ್ಯೆಬಿ ಸಮಾ ಕರ್‍ತಲೊ ಎಳ್ ಯೆಯ್ ಪತರ್ ಜೆಜು ಸರ್‍ಗಾತುಚ್ ರ್‍ಹಾವ್ಚೊ ಮನುನ್ ದೆವಾನ್ ಅಪ್ಲ್ಯಾ ಪವಿತ್ರ್ ಪ್ರವಾದ್ಯಾಂಚ್ಯಾ ಬರ್‍ಯಾ ಖಬ್ರಿಯಾತ್ನಿ ಸಾಂಗಲ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:21
16 ತಿಳಿವುಗಳ ಹೋಲಿಕೆ  

ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನಂದರೆ ಆ ಜಗತ್ತು ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುವದೇ.


ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ಆಮೇಲೆ ಅವನು ನನಗೆ - ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ; ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತಿಳಿಯಪಡಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿಕೊಟ್ಟನು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.


ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು