Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:26 - ಕನ್ನಡ ಸತ್ಯವೇದವು J.V. (BSI)

26 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ‘ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹ್ಯಾ ಜಗಾತ್ಲೆ ರಾಜಾ ಸಗ್ಳ್ಯೆ ಝಗ್ಡೊ ಕರುಕ್ ತಯಾರ್ ಹೊವ್ನ್ ಹಾತ್; ಧನಿಯಾಕ್ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಮುಂಖಡಾ ಸಗ್ಳ್ಯಿ ಗೊಳಾ ಹೊವ್ನ್ ಯೆಲಾತ್ ಮನುನ್ ಸಾಂಗುಕ್ ಲಾವ್ಲೈ ನ್ಹಯ್ ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:26
14 ತಿಳಿವುಗಳ ಹೋಲಿಕೆ  

ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?


ಕರ್ತನಾದ ಯೆಹೋವನು ಹೇಳುವದೇನಂದರೆ - ಇದು ನೆರವೇರದು, ಆಗುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು