Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:28 - ಕನ್ನಡ ಸತ್ಯವೇದವು J.V. (BSI)

28 ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜುಕ್ ವಿರೊದ್ ಹೊವ್ನ್ ಗೊಳಾ ಹೊವ್ನ್ ಯೆಲ್ಲ್ಯಾ ಲೊಕಾನಿ ತೆಚಿ ಎವ್ಜುನ್ ಫುರಾ ಹೊಯ್ ಸಾರ್ಕೆ ಕರ್‍ಲ್ಯಾನಿ ತುಜ್ಯಾ ಬಳಾನ್ ಅನಿ ತುಜ್ಯಾ ಚಿತ್ತಾನ್ ಹೆ ಸಗ್ಳ್ಯೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:28
21 ತಿಳಿವುಗಳ ಹೋಲಿಕೆ  

ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ಆದರೆ ದೇವರು ತಾನು ನೇವಿುಸಿದ ಕ್ರಿಸ್ತನು ಬಾಧೆಯನ್ನನುಭವಿಸಿ ಸಾಯಬೇಕೆಂಬದಾಗಿ ಎಲ್ಲಾ ಪ್ರವಾದಿಗಳ ಬಾಯಿಂದ ಮುಂಚಿತವಾಗಿ ಹೇಳಿಸಿದ ಮಾತನ್ನು ಹೀಗೆ ನೆರವೇರಿಸಿದನು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ಮನುಷ್ಯಕುಮಾರನು ನೇಮಕವಾದ ಪ್ರಕಾರ ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು.


ಕಳುಹಿಸಿಕೊಟ್ಟರೆ ನನಗೆ ಇಂಥಿಂಥದು ಆಗಬೇಕೆಂಬುವ ಶಾಸ್ತ್ರದ ಮಾತುಗಕು ನೆರವೇರುವದು ಹೇಗೆ ಎಂದು ಹೇಳಿದನು.


ಯೆಹೋವನ ಆತ್ಮಕ್ಕೆ ಯಾವನು ವಿಧಿಯನ್ನು ನೇವಿುಸಿದನು? ಯಾವನು ಆಲೋಚನಾಕರ್ತನಾಗಿ ಆತನಿಗೆ ಉಪದೇಶಿಸಿದನು?


ಈ ವಿವೇಕವು ಸಹ ಅತಿಶಯಾಲೋಚನಾಪರನೂ ಸುಜ್ಞಾನಶ್ರೇಷ್ಠನೂ ಆಗಿರುವ ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ ವಿವೇಕವೂ ಆತನವೇ.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು