Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:15 - ಕನ್ನಡ ಸತ್ಯವೇದವು J.V. (BSI)

15 ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊವ್ನ್ ಲೊಕಾ ಸಗ್ಳಿ ಬರೆ ನತ್ಯಾ ಮಾನ್ಸಾಕ್ನಿ ಡಾಳಿಯಾರ್ನಿ ಥವ್ನ್ ,ಪೆದ್ರು ಜಾಯ್ತ್ ರಾತಾನಾ ತೆಚಿ ಸಾವ್ಳಿ ತರಿಬಿ ತೆಂಚ್ಯಾರ್ ಪಡುಂದಿ ಮನುನ್ ತೆಂಕಾ ವಾಟೆರ್ ಹಾನುನ್ ಥೈಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:15
8 ತಿಳಿವುಗಳ ಹೋಲಿಕೆ  

ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಮನಸ್ಸಿನಲ್ಲಿ ಅಂದುಕೊಂಡು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು.


ಆ ಸೀಮೆಯಲ್ಲೆಲ್ಲಾ ಓಡಾಡುತ್ತಾ ಮೈಯಲ್ಲಿ ನೆಟ್ಟಗಿಲ್ಲದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲೆಲ್ಲಿ ಇದ್ದಾನೆಂದು ಕೇಳಿದರೋ ಅಲ್ಲಲ್ಲಿಗೆ ತೆಗೆದುಕೊಂಡು ಹೋದರು.


ಯೆರೂಸಲೇವಿುನ ಸುತ್ತಲಿರುವ ಊರುಗಳ ಜನರು ಸಹ ರೋಗಿಗಳನ್ನೂ ದೆವ್ವಗಳ ಕಾಟವಿದ್ದವರನ್ನೂ ಹೊತ್ತುಕೊಂಡು ಗುಂಪು ಗುಂಪಾಗಿ ಬರುತ್ತಿದ್ದರು; ಅವರೆಲ್ಲರಿಗೂ ವಾಸಿಯಾಗುವದು.


ಕೊಲ್ಲುವ ಸಮಯ, ಸ್ವಸ್ಥ ಮಾಡುವ ಸಮಯ, ಕೆಡವಿಬಿಡುವ ಸಮಯ, ಕಟ್ಟುವ ಸಮಯ,


ಇದಾದ ಮೇಲೆ ಆ ದ್ವೀಪದಲ್ಲಿದ್ದ ವಿುಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು