Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:3 - ಕನ್ನಡ ಸತ್ಯವೇದವು J.V. (BSI)

3 ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಪೆದ್ರುನ್ ತೆಕಾ ಅನನಿಯಾಕ್ , ತುಜೆ ಸೆತ್ ಇಕುನ್ ಗಾವಾಲ್ಯಾ ಪೈಸಾತ್ ನಿಪ್ವುನ್ ಥವ್ನ್ ಘೆವ್ನ್ ಪವಿತ್ರ್ ಆತ್ಮ್ಯಾಕ್ ಮೊಸ್ ಕರ್ತೆ ಕಾಯ್ ಅನಿ ತುಜ್ಯಾ ಮನಾತ್ ಸೈತಾನಾಕ್ ಜಾಗೊ ದಿವಲ್ಲೆ ನ್ಹಯ್ ಮನುನ್ ಸಾಂಗ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:3
25 ತಿಳಿವುಗಳ ಹೋಲಿಕೆ  

ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.


ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ನೀನು ದೇವರಿಗೆ ಹರಕೆಯನ್ನು ಕಟ್ಟಿದರೆ ಅದನ್ನು ತೀರಿಸಲು ತಡಮಾಡಬೇಡ; ಆತನು ಮೂಢರಿಗೆ ಒಲಿಯನು; ನಿನ್ನ ಹರಕೆಯನ್ನು ಒಪ್ಪಿಸು.


ನೀನಾದರೋ, - ದೇವರಿಗೆ ಏನು ಗೊತ್ತು, ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ಆ ಆಸ್ತಿ ಇದ್ದಾಗ ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆಯೂ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ. ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಯಾಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ ಆಡಿದಿ ಅಂದನು.


ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಒಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರ ಲೆಕ್ಕದಲ್ಲಿ ಸೇರಿದವನಾದ ಇಸ್ಕರಿಯೋತೆಂಬ ಯೂದನಲ್ಲಿ ಪ್ರವೇಶಿಸಲು


ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.


ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.


ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ದುಡುಕಿ ಮುಡುಪುಕಟ್ಟುವದು ಮನುಷ್ಯನಿಗೆ ಉರುಲು; ಹರಕೆಹೊತ್ತ ಮೇಲೆ ವಿಚಾರಪಡಬೇಕಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು