Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:41 - ಕನ್ನಡ ಸತ್ಯವೇದವು J.V. (BSI)

41 ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಹಿ ಅಪೊಸ್ತಲಾ ನ್ಯಾಯ್ ಕರ್ತಲ್ಯಾ ಸಭೆತ್ನಾ ಬಾಯ್ರ್ ಗೆಲೆ ಜೆಜುಚ್ಯಾ ನಾಂವಾ ಸಾಟ್ನಿ ಅವಮಾನ್ ಕರುನ್ ಘೆವ್ಕ್ ಅಮಿಬಿ ಸಕ್ತಾಂವ್ ಮನುನ್ ಕುಶಿ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:41
18 ತಿಳಿವುಗಳ ಹೋಲಿಕೆ  

ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿವಿುತ್ತ ನಿಮಗೆ ಮಾಡುವರು.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವಗಳಲ್ಲಿಯೂ ಉಲ್ಲಾಸವಾಗಿದ್ದೇವೆ.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಅವರು ಈ ಆಜ್ಞೆಯನ್ನು ಹೊಂದಿ ಬೆಳಕುಹರಿಯುವಾಗಲೇ ದೇವಾಲಯದೊಳಗೆ ಹೋಗಿ ಉಪದೇಶ ಮಾಡಿದರು. ಇತ್ತಲಾಗಿ ಮಹಾಯಾಜಕನೂ ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ ಇಸ್ರಾಯೇಲ್ಯರ ಯಜಮಾನರ ಸಭೆಯೆಲ್ಲವನ್ನೂ ಕೂಡಿಸಿ ಅವರನ್ನು ಕರತರುವದಕ್ಕೆ ಸೆರೆಮನೆಗೆ ಕಳುಹಿಸಿದರು.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಯಾಕಂದರೆ ಅವರು ಕ್ರಿಸ್ತನ ಹೆಸರನ್ನು ಪ್ರಸಿದ್ಧಿಪಡಿಸುವದಕ್ಕೋಸ್ಕರ ಹೊರಟುಹೋಗಿದ್ದಾರೆ ಮತ್ತು ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು