Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:3 - ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ತಸೆ ಹೊವ್ನ್ ಭಾವಾನು ಅನಿ ಭೆನಿಯಾನು ತುಮ್ಚ್ಯಾ ಮದ್ಲ್ಯಾ ಲೊಕಾನಿ ಸಾಂಗಲ್ಲ್ಯಾ ಸಾರ್ಕೆ, ಬುದ್ದ್ ಹೊತ್ತೆ ಅನಿ ಅನಿ ಪವಿತ್ರ್ ಆತ್ಮ್ಯಾನ್ ಭರಲ್ಲ್ಯಾ ಸಾತ್ ಲೊಕಾಕ್ನಿ ಎಚುನ್ ಕಾಡಾ, ಅಮಿ ತೆಂಕಾ ಹೆ ಕಾಮ್ ಒಪ್ಸುನ್ ದಿತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:3
34 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಪ್ರತಿಯೊಂದು ಕುಲದಿಂದ ಪ್ರಸಿದ್ಧರಾದ ಬುದ್ಧಿವಿವೇಕವುಳ್ಳ ಪುರುಷರನ್ನು ಆರಿಸಿಕೊಳ್ಳಿರಿ; ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇವಿುಸುವೆನು ಎಂದು ಹೇಳಿದೆನು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ನಾನು ಬಂದ ಮೇಲೆ ನೀವು ಯಾರನ್ನು ಯೋಗ್ಯರೆಂದು ಸೂಚಿಸುವಿರೋ ಅವರನ್ನು ಯೆರೂಸಲೇವಿುಗೆ ನಿಮ್ಮ ಉಪಕಾರದ್ರವ್ಯವನ್ನು ತೆಗೆದುಕೊಂಡು ಹೋಗುವದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.


ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಅಪೊಸ್ತಲರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ನೇವಿುಸಿದರು.


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಆದದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಮೇಲಣ ಲೋಕವನ್ನೇರಿದ ದಿನದವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿ ಹೇಳುವವನಾಗಬೇಕು ಅಂದನು.


ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ಅವನ ವಿಷಯವಾಗಿ ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರು ಒಳ್ಳೇ ಸಾಕ್ಷಿಹೇಳುತ್ತಿದ್ದರು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;


ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯಮಂಡಲಿಯನ್ನು ಕೂಡಿಸಿ - ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುತ್ತಿರುವದು ತಕ್ಕದ್ದಲ್ಲವಲ್ಲಾ;


ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.


ಅಲ್ಲಿ ಕ್ರೈಸ್ತ ಸಹೋದರರು ಸಿಕ್ಕಿದರು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿವಸ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು