Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:7 - ಕನ್ನಡ ಸತ್ಯವೇದವು J.V. (BSI)

7 ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾಚಿ ಗೊಸ್ಟಿಯಾ ಲೈ ಲೊಕಾಕ್ನಿ ಜಾವ್ನ್ ಪಾವುಕ್‍ ಲಾಗ್ಲಿ, ಜೆರುಜಲೆಮಾತ್ಲ್ಯಾ ಶಿಸಾಂಚೊ ತಾಂಡೊ ಲೈ ವಾಡುನ್ಗೆತ್‍ ಯೆಲೊ, ಲೈ ಜುದೆವಾಂಚ್ಯಾ ಯಾಜಕಾನಿ ವಿಶ್ವಾಸ್ ಕರ್‍ಲ್ಯಾನಿ ಅನಿ ಮಾನ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:7
25 ತಿಳಿವುಗಳ ಹೋಲಿಕೆ  

ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.


ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.


ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.


ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯು ಕ್ರಿಸ್ತನನ್ನು ನಂಬದ ಹಾಗೆ ಪ್ರಯತ್ನಿಸಿದನು. ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದೇ ಅರ್ಥ.


ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು.


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿಮಾಡುವರು.


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿಮಾಡಲಿ.


ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು.


ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು ತಾನು ಹಾಳುಮಾಡುತ್ತಿದ್ದ ಮತವನ್ನು ಈಗ ಪ್ರಸಿದ್ಧಿಪಡಿಸುತ್ತಾನೆಂಬ


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರಮಾಡಿಕೊಂಡು ಭಕ್ತಿಯಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾ ಪವಿತ್ರಾತ್ಮ ಪ್ರೇರಿತರಾಗಿ ಪ್ರಾರ್ಥನೆಮಾಡುತ್ತಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು