Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:8 - ಕನ್ನಡ ಸತ್ಯವೇದವು J.V. (BSI)

8 ಸ್ತೆಫನನು ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ತೆಫನನು (ಏಳು ಮಂದಿಯಲ್ಲಿ ಒಬ್ಬನು) ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸ್ತೆಪನ್ ದೆವಾಚ್ಯಾ ಕುರ್ಪೆನ್ ಅನಿ ಬಳಾನ್ ಭರುನ್ ಅಜಾಪಾ ಅನಿ ಚಮತ್ಕಾರಾಚಿ ಕಾಮಾ ಕರುಂಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:8
11 ತಿಳಿವುಗಳ ಹೋಲಿಕೆ  

ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು -


ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.


ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.


ಆಗ ಹಿರೀಸಭೆಯಲ್ಲಿ ಕೂತಿದ್ದವರೆಲ್ಲರು ಅವನನ್ನು ದೃಷ್ಟಿಸಿ ನೋಡಿ ಅವನ ಮುಖವು ದೇವದೂತನ ಮುಖದಂತೆ ಇರುವದನ್ನು ಕಂಡರು.


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಏಕಮನಸ್ಸಾಗಿ ಲಕ್ಷ್ಯಕೊಟ್ಟರು.


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ಯೇಸು ಅವನಿಗೆ - ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದಿದ್ದರೆ ನಂಬುವದೇ ಇಲ್ಲವೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು