Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:2 - ಕನ್ನಡ ಸತ್ಯವೇದವು J.V. (BSI)

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:2
29 ತಿಳಿವುಗಳ ಹೋಲಿಕೆ  

ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನಗೆ ಮೊಮ್ಮಗನೂ ಹಾರಾನನಿಗೂ ಮಗನೂ ಆಗಿರುವ ಲೋಟನನ್ನೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರಕೊಂಡು ಕಾನಾನ್‍ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟನು. ಅವರು ಹಾರಾನ್ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.


ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆಕಾಶ ಸೈನ್ಯದವರು ನಿನಗೆ ಅಡ್ಡಬೀಳುತ್ತಾರೆ. ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.


ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಇದನ್ನು ಅವನು ಹೇಳಿದಾಗ ಫರಿಸಾಯರಿಗೂ ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಭೇದವುಂಟಾಯಿತು.


ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ಮಹಾಪ್ರಭಾವವುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ; ಮಹಾಪ್ರಭಾವವುಳ್ಳ ಅರಸನು ಈತನೇ. ಸೆಲಾ.


ದ್ವಾರಗಳೇ, ಉನ್ನತವಾಗಿರ್ರಿ; ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ; ಮಹಾಪ್ರಭಾವವುಳ್ಳ ಅರಸನು ಆಗವಿುಸುತ್ತಾನೆ.


ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಯಾಕೋಬನು ಅವರಿಗೆ - ಅಣ್ಣಂದಿರಾ, ನೀವು ಯಾವ ಊರಿನವರು ಎಂದು ಕೇಳಲು - ನಾವು ಖಾರಾನ್ ಊರಿನವರು ಅಂದರು.


ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು.


ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.


ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್, ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಆಗ ಮಹಾಯಾಜಕನು - ಈ ಮಾತುಗಳು ಹೌದೋ ಎಂದು ಕೇಳಿದ್ದಕ್ಕೆ ಅವನು - ಸಹೋದರರೇ, ತಂದೆಗಳೇ, ಕೇಳಿರಿ -


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು