Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:26 - ಕನ್ನಡ ಸತ್ಯವೇದವು J.V. (BSI)

26 ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮಾರನೆಯ ದಿನ ಇಬ್ಬರು ಇಸ್ರಯೇಲರೇ ಜಗಳವಾಡುತ್ತಿರುವುದನ್ನು ಕಂಡನು. ಮೋಶೆ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದನು. ಅವರಿಗೆ, ‘ಗೆಳೆಯರೇ, ನೀವು ಸಹೋದರರಲ್ಲವೆ? ಹೀಗೇಕೆ ಕಿತ್ತಾಡುತ್ತಿದ್ದೀರಿ?’ ಎಂದು ಸಮಾಧಾನ ಪಡಿಸಲು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದುಸ್ರ್ಯಾಂದಿಸಿ ತೆನಿ ಎಕಾಮೆಕಾಕ್ನಿ ಮಾರುನ್ ಘೆಯ್ತ್ ರಾತಾನಾ ತೊ ಮೊಯ್ಜೆ ತೆಂಚ್ಯಾ ಇದ್ರಾಕ್ ಯೆವ್ನ್ ಸಮಾಧಾನ್ ಕರುಕ್ ಸಾಟ್ನಿ ತೆಂಕಾ, ತುಮಿ ಭಾವ್ ಭಾವಾ ಹೊವ್ನ್ ಬಿ ಕಶ್ಯಾಕ್ ಎಕಾಮೆಕಾಕ್ ದುಕ್ವುನ್ ಘೆತ್ಯಾಶಿ? ಮನುನ್ ಇಚಾರುಕ್ ಗೆಲೊ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:26
12 ತಿಳಿವುಗಳ ಹೋಲಿಕೆ  

ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ


ಅನ್ಯಾಯಹೊಂದಿದ ಸಹೋದರನು ಬಲವಾದ ಪಟ್ಟಣಕ್ಕಿಂತಲೂ ಅಸಾಧ್ಯ; ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು.


ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.


ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.


ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬದು ತನ್ನ ಸಹೋದರರಿಗೆ ತಿಳಿದುಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು