Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:35 - ಕನ್ನಡ ಸತ್ಯವೇದವು J.V. (BSI)

35 ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಆಗಿನ್ ಜಳುಕ್ಲಾಗಲ್ಯಾ ಝಿಳಿತ್ ಮೊಯ್ಜೆನ್ ದೆವ್ ದುತಾಕ್ ಬಗಲ್ಯಾನ್, ದೆವಾನ್ ತ್ಯಾ ದುತಾಕ್ನಾಚ್ ಮೊಯ್ಜೆಕ್ ಇಸ್ರಾಯೆಲ್ ಲೊಕಾಕ್ನಿ ಸುಟ್ಕಾ ಕರ್‍ತಲೊ ಅನಿ ಅದಿಪತಿ ಕರುನ್ ಧಾಡಲೆ, ಖರೆ ತ್ಯಾ ಲೊಕಾನಿ ತೆಕಾ ಅಮ್ಚೊ ಮುಖಂಡ್ ಅನಿ ಝಡ್ತಿ ಕರ್‍ತಲೊ ಮನುನ್ ತುಕಾ ಕೊನಿತರಿ ಸಾಂಗ್ಲಾತ್ ಕಾಯ್? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:35
32 ತಿಳಿವುಗಳ ಹೋಲಿಕೆ  

ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.


ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಯಾಕಂದರೆ ದೇವದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯವಾದ ಪ್ರತಿಫಲವುಂಟಾದ ಮೇಲೆ [ನಮ್ಮ ಮುಂದಿಟ್ಟಿರುವ]


ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ನಾಲ್ವತ್ತು ವರುಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಮೋಶೆಯು ಹೇಳಿದ್ದೇನಂದರೆ - ದೇವರಾಗಿರುವ ಕರ್ತನು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು, ಆತನು ನಿಮಗೆ ಹೇಳುವ ಎಲ್ಲಾ ಮಾತುಗಳಿಗೆ ಕಿವಿಗೊಡಬೇಕು;


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.


ಅದಕ್ಕೆ ಅವರು - ಇವನನ್ನು ಬೇಡ, ಬರಬ್ಬನನ್ನು ಬಿಟ್ಟುಕೊಡಬೇಕು ಎಂದು ತಿರಿಗಿ ಕೂಗಿ ಹೇಳಿದರು. ಈ ಬರಬ್ಬನು ಕಳ್ಳನಾಗಿದ್ದನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ.


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಕೆಲವು ಮಂದಿ ಕಾಕಪೋಕರು - ಇವನೋ ನಮ್ಮನ್ನು ರಕ್ಷಿಸುವವನು ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು.


ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.


ಆದರೆ ಸತ್ತವರು ಬದುಕಿ ಏಳುತ್ತಾರೆಂಬ ವಿಷಯದಲ್ಲಿ ಹೇಳಬೇಕಾದರೆ - ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ಮೋಶೆಗೆ ನುಡಿದದ್ದನ್ನು ನೀವು ಮೋಶೆಯ ಗ್ರಂಥದಲ್ಲಿ ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಓದಲಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು