Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:39 - ಕನ್ನಡ ಸತ್ಯವೇದವು J.V. (BSI)

39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೆನಿ ಪಾನಿಯಾತ್ನಾ ವೈರ್ ಯೆಲ್ಲ್ಯಾತನ್ನಾ, ಧನಿಯಾಚ್ಯಾ ಆತ್ಮ್ಯಾನ್ ಫಿಲಿಪಾಕ್ ಉಕ್ಲುನ್ ನ್ಹೆಲ್ಯಾನ್, ಅನಿ ಕನ್ನಾಬಿ ಫಿಲಿಪ್ ತ್ಯಾ ಮಾನ್ಸಾಕ್ ದಿಸುಕ್ ನಾ, ತೊ ಲೈ ಕುಶಿ ಹೊವ್ನ್ ಅಪ್ನಿ ಜಾವ್‍ಲಾಗಲ್ಯಾ ವಾಟೆನ್ ಫಿಡೆ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:39
29 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಅನಂತರ ಅವರು ಅವನಿಗೆ - ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ; ನಿನ್ನ ಯಜಮಾನನನ್ನು ಹುಡುಕಹೋಗುವದಕ್ಕೆ ಅವರಿಗೆ ಅಪ್ಪಣೆಯಾಗಲಿ. ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು ಎಂದು ಹೇಳಿದರು; ಅವನು ಅವರಿಗೆ - ನೀವು ಕಳುಹಿಸಬೇಡಿರಿ ಅಂದನು.


ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ದೇವರಾತ್ಮವು ನನ್ನನ್ನು ಎತ್ತಿ ಒಳಗಣ ಪ್ರಾಕಾರಕ್ಕೆ ತರಲು ಆಹಾ, ಯೆಹೋವನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ನಾನು ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನದೊಡೆಯರನ್ನು ನೋಡಿದೆನು.


ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಹೀಗೆ ಹೇಳದೆ ನೀವು ಅಹಂಭಾವದಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮಭರಿತರೂ ಆದರು.


ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.


ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ಸರ್ವಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.


ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ತಗ್ಗಿನಲ್ಲಿ ಇಳಿಸಿ


ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.


ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು