Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:27 - ಕನ್ನಡ ಸತ್ಯವೇದವು J.V. (BSI)

27 ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಬಾರ್ನಾಬಾಸ್ ತೆಕಾ ಮಜತ್ ಕರುಕ್ ಯೆಲೊ ಅನಿ ಅಪೊಸ್ತಲಾಂಚ್ಯಾ ಜಗ್ಗೊಳ್ ಬುಲ್ವುನ್ ಹಾನ್ಲ್ಯಾನ್, ಸಾವ್ಲಾನ್ ದಮಸ್ಕಾಚ್ಯಾ ವಾಟೆರ್ ಧನಿಯಾಕ್ ಬಗಲ್ಲೆ, ಅನಿ ಧನಿಯಾನ್ ತೆಚ್ಯಾ ವಾಂಗ್ಡಾ ಬೊಲಲ್ಲೆ ಬರ್ನಾಬಾಸಾನ್ ತೆಂಕಾ ಸಾಂಗ್ಲ್ಯಾನ್, ತವ್ಡೆಚ್ ನ್ಹಯ್ ಸಾವ್ಲಾನ್ ಧಮಾಸ್ಕಾತ್ ಲೊಕಾಕ್ನಿ ಧನಿಯಾಚ್ಯಾ ವಿಶಯಾತ್ ಧೈರ್‍ಯಾನಿ ಪರ್ಗಟ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:27
20 ತಿಳಿವುಗಳ ಹೋಲಿಕೆ  

ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಇದಲ್ಲದೆ ವಿುಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟ ಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಕಟ್ಟಕಡೆಗೆ ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು.


ಅಥವಾ, ಕೈಕೆಲಸವನ್ನು ಮಾಡದೆ ಜೀವಿಸುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಹಕ್ಕಿಲ್ಲವೇನು?


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಬಾರ್ನಬ ಸೌಲರು ಮಾಡಬೇಕಾದ ಧರ್ಮಕಾರ್ಯವನ್ನು ತೀರಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರಕೊಂಡು ಯೆರೂಸಲೇವಿುನಿಂದ ಹಿಂತಿರಿಗಿ ಬಂದರು.


ಆಗ ಬಹುಮಂದಿ ಕರ್ತನಿಗೆ ಸೇರಿಕೊಂಡರು. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೋಗಿ


ಇವರ ವಿಷಯವಾದ ವರ್ತಮಾನವು ಯೆರೂಸಲೇವಿುನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.


ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತಾಡಿ ತರ್ಕಿಸುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು