Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:1
20 ತಿಳಿವುಗಳ ಹೋಲಿಕೆ  

ಯೆಹೋವನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು, ಯೆಹೋವನ ಆಜ್ಞೆಯ ಪ್ರಕಾರ ಡೇರೆಗಳನ್ನು ಕಿತ್ತು ಹೊರಡುವರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.


ನೀನು ಬೆಳ್ಳಿಯ ತಗಡಿನಿಂದ ಎರಡು ತುತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಕರಿಸುವದಕ್ಕೂ ದಂಡುಗಳನ್ನು ಹೊರಡಿಸುವದಕ್ಕೂ ಅವುಗಳನ್ನು ಉಪಯೋಗಿಸಬೇಕು.


ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.


ಆಕೆಯು ಯಾಕೋಬನಿಗೆ ಇವರನ್ನೂ ದೀನಳೆಂಬ ಹೆಣ್ಣುಮಗಳನ್ನೂ ಪದ್ದನ್ಅರಾವಿುನಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.


ಇಸ್ರಾಯೇಲ್ಯರೆಲ್ಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.


ಇಸ್ರಾಯೇಲ್ಯರ ಪ್ರಧಾನಪುರುಷರು ಅಂದರೆ ಗೋತ್ರಪ್ರಮುಖರಾಗಿದ್ದು ಕುಲಾಧಿಪತಿಗಳಾಗಿಯೂ ಲೆಕ್ಕಿಸಲ್ಪಟ್ಟ ಭಟರ ಮೇಲೆ ನಾಯಕರಾಗಿಯೂ ಇದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.


ತುತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;


ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು - ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ


ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಆರ್ಭಟಿಸುತ್ತಾ ತುತೂರಿ ಊದುತ್ತಾ ಯೆಹೋವನ ಮಂಜೂಷವನ್ನು ತಂದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ನಾರು ಬಟ್ಟೆಗಳನ್ನು ಧರಿಸಿಕೊಂಡು ತಾಳ ಸ್ವರಮಂಡಲ ಕಿನ್ನರಿ ಇವುಗಳನ್ನು ಹಿಡಿದುಕೊಂಡ ಲೇವಿಯ ಗಾಯಕರಾದ ಆಸಾಫ್‍ಹೇಮಾನ್ ಯೆದುತೂನರೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.


ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲ್ಯರ ಅರಸನಾದ ದಾವೀದನು ನೇವಿುಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಕೀರ್ತಿಸುವದಕ್ಕೋಸ್ಕರ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆಯೂ ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡು


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ತುತೂರಿಗಳನ್ನೂ ಕೊಂಬನ್ನೂ ಊದುತ್ತಾ ಯೆಹೋವರಾಜನಿಗೆ ಜಯಘೋಷಮಾಡಿರಿ.


ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೇವದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು