Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:2 - ಕನ್ನಡ ಸತ್ಯವೇದವು J.V. (BSI)

2 ನೀನು ಬೆಳ್ಳಿಯ ತಗಡಿನಿಂದ ಎರಡು ತುತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಕರಿಸುವದಕ್ಕೂ ದಂಡುಗಳನ್ನು ಹೊರಡಿಸುವದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:2
14 ತಿಳಿವುಗಳ ಹೋಲಿಕೆ  

ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.


ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಒಂದೇ ಪದವಿಯನ್ನು ನಿರೀಕ್ಷಿಸುವದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ಭರವಸವು ಒಂದೇ, ಸ್ನಾನದೀಕ್ಷೆ ಒಂದೇ.


ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ನಾರು ಬಟ್ಟೆಗಳನ್ನು ಧರಿಸಿಕೊಂಡು ತಾಳ ಸ್ವರಮಂಡಲ ಕಿನ್ನರಿ ಇವುಗಳನ್ನು ಹಿಡಿದುಕೊಂಡ ಲೇವಿಯ ಗಾಯಕರಾದ ಆಸಾಫ್‍ಹೇಮಾನ್ ಯೆದುತೂನರೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ಜೀರ್ಣೋದ್ಧಾರಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು


ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಕಾಗಿಲ್ಲ.


ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿರಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -


ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ;


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು