Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:10 - ಕನ್ನಡ ಸತ್ಯವೇದವು J.V. (BSI)

10 ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೇಬಾಗಲುಗಳಲ್ಲಿ ನಿಂತು ಅಳುತ್ತಿರಲಾಗಿ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಮೋಶೆಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲ್ಲ ಕುಟುಂಬದವರು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತು ನಿಷ್ಠೂರವಾಗಿ ಮಾತನಾಡಿಕೊಳ್ಳುತ್ತಿದ್ದದ್ದು ಮೋಶೆಗೆ ಕೇಳಿಸಿತು. ಆಗ ಸರ್ವೇಶ್ವರನ ಕೋಪ ಉಕ್ಕೇರಿತು; ಮೋಶೆಗೆ ಇದನ್ನು ಸಹಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:10
19 ತಿಳಿವುಗಳ ಹೋಲಿಕೆ  

ಯೆಹೋವನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ ಆತನ ರಕ್ಷಣೆಯನ್ನು ನಂಬದೆಯೂ ಹೋದದರಿಂದ


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವದಿಲ್ಲವೋ?


ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲ್ಯರನ್ನು ಅಸಹ್ಯದಿಂದ ನಿರಾಕರಿಸಿಬಿಟ್ಟನು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಆದಕಾರಣ ಅವರೆಲ್ಲರೂ ಕೋರಹ ದಾತಾನ್ ಅಬೀರಾಮರ ಗುಡಾರದ ಸುತ್ತಲಿರದೆ ಬೇರೆ ಹೋದರು. ದಾತಾನ್ ಅಬೀರಾಮರೂ ಅವರ ಹೆಂಡರೂ ಮಕ್ಕಳೂ ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಲುಗಳಲ್ಲಿ ನಿಂತು ಕೊಂಡರು.


ಆ ಮೋಶೆ ಭೂವಿುಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹುಸಾತ್ವಿಕನು.


ಇಸ್ರಾಯೇಲ್ಯರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನುಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು. ರಾತ್ರಿಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.


ಆಗ ಮೋಶೆ ಯೆಹೋವನಿಗೆ - ಈ ಜನರನ್ನು ನಡಿಸಿಕೊಂಡು ಹೋಗುವ ಭಾರವನ್ನು ನನ್ನ ಮೇಲೆ ಹೊರಿಸಿ ನೀನು ಯಾಕೆ ನಿನ್ನ ದಾಸನಿಗೆ ಅಪಕಾರ ಮಾಡುತ್ತೀಯೇ?


ಆ ಮೇಘವು ದೇವದರ್ಶನದ ಗುಡಾರದ ಬಳಿಯಿಂದ ಹೋದಾಗ, ಆಹಾ, ವಿುರ್ಯಾಮಳಿಗೆ ತೊನ್ನು ಹತ್ತಿದದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿಹೋಗಿತ್ತು. ಆರೋನನು ಆಕೆಯನ್ನು ನೋಡಲಾಗಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು