Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:11 - ಕನ್ನಡ ಸತ್ಯವೇದವು J.V. (BSI)

11 ಆಗ ಮೋಶೆ ಯೆಹೋವನಿಗೆ - ಈ ಜನರನ್ನು ನಡಿಸಿಕೊಂಡು ಹೋಗುವ ಭಾರವನ್ನು ನನ್ನ ಮೇಲೆ ಹೊರಿಸಿ ನೀನು ಯಾಕೆ ನಿನ್ನ ದಾಸನಿಗೆ ಅಪಕಾರ ಮಾಡುತ್ತೀಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆತ ಸರ್ವೇಶ್ವರನಿಗೆ, “ನಿಮ್ಮ ದಾಸನಾದ ನನಗೇಕೆ ಈ ಜನರನ್ನು ಕರೆದೊಯ್ಯುವ ಭಾರವನ್ನು ಹಾಕಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:11
16 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ ಭಾರವನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವದು ಹೇಗೆ?


ಆಗ ಮೋಶೆ ಯೆಹೋವನ ಬಳಿಗೆ ತಿರಿಗಿ ಬಂದು - ಸ್ವಾಮೀ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ನನ್ನನ್ನು ಕಳುಹಿಸಿದ್ದು ಯಾಕೆ?


ಇನ್ನೂ ಬೇರೆ ಸಂಗತಿಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯು ದಿನದಿನ ನನ್ನನ್ನು ಪೀಡಿಸುತ್ತದೆ.


ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು?


ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು.


ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೇಬಾಗಲುಗಳಲ್ಲಿ ನಿಂತು ಅಳುತ್ತಿರಲಾಗಿ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಮೋಶೆಗೆ ಬೇಸರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು