Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:13 - ಕನ್ನಡ ಸತ್ಯವೇದವು J.V. (BSI)

13 ಆಗ ಮೋಶೆ ಯೆಹೋವನಿಗೆ - ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಮೋಶೆ ಸರ್ವೇಶ್ವರನಿಗೆ, “ಹೇ ದೇವಾ, ಆಕೆಯನ್ನು ಗುಣಪಡಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ಮೋಶೆ ಯೆಹೋವನಿಗೆ ಪ್ರಾರ್ಥಿಸಿ, “ದೇವರೇ, ದಯಮಾಡಿ ಈಕೆಯನ್ನು ವಾಸಿಮಾಡು” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:13
23 ತಿಳಿವುಗಳ ಹೋಲಿಕೆ  

ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು.


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.


ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ಯೆಹೋವನು ಅವನಿಗೆ - ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಸೇರಿಸು ಎಂದು ಹೇಳಿದನು. ಅವನು ಅದನ್ನು ತಿರಿಗಿ ಉಡಿಯಲ್ಲಿ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ಮೈಯಂತೆ ಆಗಿತ್ತು.


ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.


ಅರ್ಧಮಾಂಸ ಕೊಳೆತು ಹೋಗಿ ಹುಟ್ಟಿದ ಶಿಶು ಶವದಂತೆ ಈಕೆ ಆಗಬಾರದು ಎಂದು ಬೇಡಿದನು.


ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.


ನಾನಂತೂ - ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು ಅಂದೆನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು