Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:6 - ಕನ್ನಡ ಸತ್ಯವೇದವು J.V. (BSI)

6 ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:6
50 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡು - ನಿನಗೆ ಯಾವ ವರ ಬೇಕು ಕೇಳಿಕೋ ಎಂದು ಹೇಳಲು ಸೊಲೊಮೋನನು -


ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು.


ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನವಾಗಿರಬೇಕು ಎಂದು ತಿಳುಕೊಂಡರು. ಅವನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.


ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.


ನಾನು ಏಕಾಕಿಯಾಗಿ ಉಳಿದು ಆ ಅದ್ಭುತದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಿತ್ರಾಣನಾದೆನು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ಅವನು ಧ್ಯಾನ ಪರವಶನಾಗಿ ಆಕಾಶವು ತೆರೆದಿರುವದನ್ನೂ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಏನೋ ಒಂದು ವಸ್ತುವು ಭೂವಿುಯ ಮೇಲೆ ಇಳಿಯುವದನ್ನೂ ಕಂಡನು.


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.


ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನಂದರೆ - ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ಮನುಷ್ಯರಿಗೆ ಗಾಢನಿದ್ರೆಯುಂಟಾದಾಗಲೂ ಹಾಸಿಗೆಯ ಮೇಲೆ ಜಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ ನನಗೆ


ಆಗ ಯೆಹೋವನು ಮೋಶೆಗೆ ಇಂತೆಂದನು - ನಿನ್ನನ್ನು ಫರೋಹನಿಗೆ ದೇವರ ಸ್ಥಾನದಲ್ಲಿ ನೇವಿುಸಿದ್ದೇನೆ, ನೋಡು.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು -


ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.


ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು


ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.


ಅನಂತರ ಸಮುವೇಲನು ಮಲಗಿ ಹೊತ್ತಾರೆಯಲ್ಲೆದ್ದು ಯೆಹೋವಮಂದಿರದ ಕದಗಳನ್ನು ತೆರೆದನು; ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವದಕ್ಕೆ ಭಯಪಟ್ಟನು.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇವಿುಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿ ತನ್ನ ಎಲ್ಲಾ ಸೇವಕರಿಗೋಸ್ಕರ ಔತಣಮಾಡಿಸಿದನು.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -


ಯಾಕೋಬನು ನಿದ್ದೆಯಿಂದ ಎಚ್ಚತ್ತು - ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ಇದ್ದಾನೆ;


ಒಂದು ದಿನ ಯೋಸೇಫನು ಕನಸುಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಲು ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಅವನು ಇನ್ನೊಂದು ಕನಸು ಕಂಡು ಅದನ್ನೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ - ಇನ್ನೊಂದು ಕನಸು ಕಂಡಿದ್ದೇನೆ; ಅದರಲ್ಲಿ ಸೂರ್ಯಚಂದ್ರರೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು (ನಿಮಗೆ) ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು.


ಅದೇ ರಾತ್ರಿಯಲ್ಲಿ ಯೆಹೋವನು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ -


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ಇಗೋ, ಆ ದಿನಗಳಲ್ಲಿ, ನಾನು ಯೆಹೂದದ ಮತ್ತು ಯೆರೂಸಲೇವಿುನ ದುರವಸ್ಥೆಯನ್ನು ತಪ್ಪಿಸುವ ಕಾಲದಲ್ಲಿ


ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು