Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:20 - ಕನ್ನಡ ಸತ್ಯವೇದವು J.V. (BSI)

20 ಭೂವಿುಯು ಸಾರವಾದದ್ದೋ ನಿಸ್ಸಾರವಾದದ್ದೋ, ಮರಗಳುಳ್ಳದ್ದೋ ಬೈಲೋ ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ಸಾಹಸಮಾಡಿ ತರಬೇಕೆಂದು ಬೋಧಿಸಿದನು. ಆಗ ದ್ರಾಕ್ಷಾಲತೆಗಳ ಪ್ರಥಮಫಲಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಭೂಮಿ ಸಾರವತ್ತಾದುದೋ ನಿಸ್ಸಾರವಾದುದೋ ಮರಗಿಡಗಳಿಂದ ಕೂಡಿದೆಯೋ ಬೈಲುಪ್ರದೇಶವಾಗಿದೆಯೋ ನೋಡಿ ತಿಳಿದುಕೊಳ್ಳಿ. ಅದಲ್ಲದೆ, ಆ ನಾಡಿನ ಉತ್ಪನ್ನಗಳಲ್ಲಿ ಕೆಲವನ್ನು ಪ್ರಯಾಸಪಟ್ಟು ತರಬೇಕು.” ಅದು ದ್ರಾಕ್ಷೆಯ ಪ್ರಥಮ ಫಲಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:20
19 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವವು; ಇಸ್ರಾಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವವು.


ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಸಾರವುಳ್ಳ ವಿಸ್ತಾರದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಸೇವಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದದರಿಂದಲೇ ನಾವು ಈಗ ದಾಸರಾಗಿದ್ದೇವೆ.


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ;


ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ನನ್ನ ಮಗನೇ, ನೀನು ಕೃತಾರ್ಥನಾಗುವಂತೆಯೂ ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶವೆಂದು ನಮಗೆ ವರ್ತಮಾನ ತಿಳಿಸಿದರು.


ಅವರ ದೇಶವು ಒಳ್ಳೇದೋ ಕೆಟ್ಟದ್ದೋ, ಅವರ ವಾಸಸ್ಥಳಗಳು ಪಾಳೆಯಗಳೋ ಕೋಟೆಗಳೋ,


ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ ಎಷ್ಕೋಲೆಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶವನ್ನು ಸಂಚರಿಸಿ ನೋಡಿ ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ -


ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು; ತಂದೆತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು; ಸೂರೆಸುಲಿಗೆ ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು; ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು