Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:29 - ಕನ್ನಡ ಸತ್ಯವೇದವು J.V. (BSI)

29 ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ [ಅರಣ್ಯದಲ್ಲೇ ಸಾಯುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಮ್ಮ ಶವಗಳು ಈ ಮರುಭೂಮಿಯಲ್ಲೇ ಬೀಳುವುವು. ನೀವು ನನಗೆ ವಿರೋಧವಾಗಿ ಗೊಣಗಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:29
13 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರ ಒಟ್ಟಾದ ಸಂಖ್ಯೆ … 603,550.


ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ.


ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ಯರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿರಲಿಲ್ಲ.


ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು