Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:21 - ಕನ್ನಡ ಸತ್ಯವೇದವು J.V. (BSI)

21 ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:21
8 ತಿಳಿವುಗಳ ಹೋಲಿಕೆ  

ಶಾಶ್ವತ ನಿಯಮವಾಗಿ ಇಸ್ರಾಯೇಲ್ಯರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು; ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲ್ಯರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕು.


ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ಸ್ವಂತಕ್ಕಾಗಿ ನಾನು ನೇವಿುಸಿರುವ ಹತ್ತನೆಯ ಪಾಲನ್ನು ನೀವು ಇಸ್ರಾಯೇಲ್ಯರಿಂದ ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಪಾಲನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಪ್ರತ್ಯೇಕಿಸಬೇಕು;


ಯೆಹೋವನು ಮೋಶೆಯ ಮೂಲಕ ಈ ಆಜ್ಞೆಗಳನ್ನು ಕೊಟ್ಟ ದಿನ ಮೊದಲುಗೊಂಡು ನಿಮ್ಮ ಎಲ್ಲಾ ತಲಾಂತರಗಳವರೆಗೂ ಯಾವಾಗಲಾದರೂ ಸಮೂಹದವರು ತಿಳಿಯದೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಗಳಾದರೆ


ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು