Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:18 - ಕನ್ನಡ ಸತ್ಯವೇದವು J.V. (BSI)

18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:18
7 ತಿಳಿವುಗಳ ಹೋಲಿಕೆ  

ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ


ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಯನ್ನು, ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು; ಹಾಗೆಯೇ ನೀನೂ ಆರೋನನೂ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು ಎಂದು ಹೇಳಿದನು.


ಅದಲ್ಲದೆ ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಹೊಳೆಯಿತು.


ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.


ಅವನು ಸತ್ತವರಿಗೂ ಬದುಕುವವರಿಗೂ ನಡುವೆ ನಿಂತಿರುವಾಗಲೇ ಆ ವಿಪತ್ತು ಶಮನವಾಯಿತು.


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು