Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:28 - ಕನ್ನಡ ಸತ್ಯವೇದವು J.V. (BSI)

28 ಆಗ ಮೋಶೆ ಜನರಿಗೆ - ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಇವುಗಳನ್ನು ನಡಿಸುವದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳುಕೊಳ್ಳುವದು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:28
17 ತಿಳಿವುಗಳ ಹೋಲಿಕೆ  

ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಕಣಿಹೇಳುವ ನಿನ್ನ ಸ್ವಕುಲಸ್ತ್ರೀಯರ ಕಡೆಗೆ ಮುಖಮಾಡಿಕೊಂಡು ಅವರಿಗೆ ಖಂಡನೆಯಾಗಿ ಹೀಗೆ ಪ್ರವಾದಿಸು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.


ನಾನು ತಂದೆಯಲ್ಲಿ ಇದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆಂಬುವ ನನ್ನ ಮಾತನ್ನು ನಂಬಿರಿ; ಇಲ್ಲದಿದ್ದರೆ ಆ ಕ್ರಿಯೆಗಳನ್ನೇ ನೋಡಿ ನನ್ನ ಮಾತನ್ನು ನಂಬಿರಿ.


ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.


ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ಫರೋಹನು ನಿಮಗೆ - ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕೆಂದು ಹೇಳಿದರೆ ಮೋಶೆಯು ಆರೋನನಿಗೆ - ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಬೀಸಾಡು ಎಂದು ಹೇಳಬೇಕು, ಅದು ಸರ್ಪವಾಗುವದು ಎಂದು ಆಜ್ಞಾಪಿಸಿದನು.


ಹೀಗಿರುವದರಿಂದ ನೀನು ಹೊರಟುಹೋಗು; ನಾನು ನಿನ್ನ ಬಾಯಿಗೆ ಸಹಾಯವಾಗಿದ್ದು ನೀನು ಮಾತಾಡಬೇಕಾದದ್ದನ್ನು ಬೋಧಿಸುವೆನು ಎಂದು ಹೇಳಿದನು.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು