Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:30 - ಕನ್ನಡ ಸತ್ಯವೇದವು J.V. (BSI)

30 ಮತ್ತು ನೀನು ಲೇವಿಯರಿಗೆ ಹೀಗೆ ಹೇಳಬೇಕು - ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ವಿುಕ್ಕದ್ದನ್ನು ಕಣದಲ್ಲಿನ ದವಸದ ಹಾಗೂ ದ್ರಾಕ್ಷೇತೊಟ್ಟಿಯ ರಸದ ಹಾಗೂ ಭಾವಿಸಿ ಉಪಯೋಗಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ಲೇವಿಯರಿಗೆ ಮತ್ತೆ ಹೀಗೆಂದು ತಿಳಿಸು: “ನಿಮಗೆ ದೊರಕಿದ್ದರಲ್ಲಿ ಉತ್ತಮವಾದುದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಮಿಕ್ಕದ್ದನ್ನು ಕಣದಲ್ಲಿನ ದವಸ ಹಾಗೂ ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ನೀವು ಉಪಯೋಗಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಆ ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿಆಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:30
12 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.


ನಿಮಗೆ ಕೊಡಲ್ಪಡುವ ಸಕಲಪದಾರ್ಥಗಳಲ್ಲಿಯೂ ನೀವು ಉತ್ತಮಭಾಗವನ್ನೇ ಅಂದರೆ ದೇವರ ವಸ್ತುವಾಗುವದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು.


ನೀವೂ ನಿಮ್ಮ ಮನೆಗಳವರೂ ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು