Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:9 - ಕನ್ನಡ ಸತ್ಯವೇದವು J.V. (BSI)

9 ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:9
24 ತಿಳಿವುಗಳ ಹೋಲಿಕೆ  

ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ದೋಷಪರಿಹಾರಕಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ವಿಧಿಯುಂಟು; ಹೇಗಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು;


ದೋಷಪರಿಹಾರಕಯಜ್ಞಪಶುವನ್ನೂ ಸರ್ವಾಂಗಹೋಮಪಶುವನ್ನೂ ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಯಾಕಂದರೆ ದೋಷಪರಿಹಾರಕಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು.


ನಿಮ್ಮ ದೇಶಸ್ಥರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ; ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


ಪ್ರಾಯಶ್ಚಿತ್ತ ಯಜ್ಞನಿಯಮಗಳು. ಆ ಯಜ್ಞವು ಮಹಾಪರಿಶುದ್ಧವಾದದ್ದು.


ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.


ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಅದಕ್ಕೆ ಹುಳಿಕಲಸಿ ಸುಡಕೂಡದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದಿರಬೇಕೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು; ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.


ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.


ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕಯಜ್ಞದ್ರವ್ಯವನ್ನೂ ಪ್ರಾಯಶ್ಚಿತ್ತಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ಅವರಿಗೆ ಸಲ್ಲಬೇಕು.


ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಹೊತ್ತು ಮುಣುಗಿದನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು;


ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ದಾಸರೂ ಅವನ ಮನೆಯಲ್ಲಿ ಹುಟ್ಟಿದ ದಾಸರೂ ಅದನ್ನು ಊಟಮಾಡಬಹುದು.


ಯಾಜಕಸೇವೆಮಾಡುವ ಲೇವಿಯರಿಗಾಗಲಿ ಲೇವಿಕುಲದವರಲ್ಲಿ ಯಾರಿಗೇಯಾಗಲಿ ಇತರ ಇಸ್ರಾಯೇಲ್ಯರೊಡನೆ ಸ್ವಂತಕ್ಕಾಗಿ ಭೂಸ್ಥಿತಿ ದೊರೆಯುವದಿಲ್ಲವಷ್ಟೆ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.


ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುವೆವು; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡಿಸುತ್ತಿರುವ ಯಾಜಕರಿಗೆ ಕೊಡುವೆವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು