Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:20 - ಕನ್ನಡ ಸತ್ಯವೇದವು J.V. (BSI)

20 ಅಶುದ್ಧನಾಗಿ ದೋಷಪರಿಹಾರಮಾಡಿಕೊಳ್ಳದವನು ಯೆಹೋವನ ದೇವಸ್ಥಾನವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಡಿಗೆಟ್ಟು ದೋಷಪರಿಹಾರ ಮಾಡಿಕೊಳ್ಳದವನು ಸರ್ವೇಶ್ವರನ ದೇವಸ್ಥಾನವನ್ನು ಅಪವಿತ್ರಗೊಳಿಸುತ್ತಾನೆ. ಆದಕಾರಣ ಅಂಥವನಿಗೆ ಸಭೆಯಿಂದ ಬಹಿಷ್ಕಾರ ಹಾಕಬೇಕು. ಶುದ್ಧೀಕರಣ ಜಲವನ್ನು ತನ್ನ ಮೇಲೆ ಚಿಮುಕಿಸಿಕೊಳ್ಳದೆ ಹೋದುದರಿಂದ ಅವನು ಮಡಿಗೆಟ್ಟವನಾಗಿಯೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅಪವಿತ್ರನಾಗಿದ್ದು, ತನ್ನನ್ನು ಶುದ್ಧಪಡಿಸಿಕೊಳ್ಳದವನು ಸಭೆಯ ಮಧ್ಯದಿಂದ ತೆಗೆದುಹಾಕಬೇಕು ಏಕೆಂದರೆ ಅವನು ಯೆಹೋವ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ. ನೀರು ಅವನ ಮೇಲೆ ಚಿಮಿಕಿಸಿಕೊಳ್ಳದ ಕಾರಣ ಅವನು ಅಪವಿತ್ರನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:20
13 ತಿಳಿವುಗಳ ಹೋಲಿಕೆ  

ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವವನಾದನು. ಅಂಥವನನ್ನು ಇಸ್ರಾಯೇಲ್ಯರಿಂದ ತೆಗೆದುಹಾಕಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಇರುವದರಿಂದ ಅವನು ಅಶುದ್ಧನು; ಅವನಿಗುಂಟಾದ ಅಪವಿತ್ರತೆಯು ಇದ್ದೇ ಇರುವದು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.


ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆಯೂ ಸ್ನಾನಮಾಡದೆಯೂ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಉಣ್ಣಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದದ್ದನ್ನು ಮುಟ್ಟಿದವನಾಗಲಿ ವೀರ್ಯಸ್ಖಲನ ಮಾಡಿಕೊಂಡವನಾಗಲಿ


ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು