Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:20 - ಕನ್ನಡ ಸತ್ಯವೇದವು J.V. (BSI)

20 ಆದರೆ ಎದೋಮ್ಯರು - ನೀವು ದಾಟಿಲೇಬಾರದು ಎಂದು ಉತ್ತರ ಕೊಟ್ಟು ಬಹುಜನ ಕೂಡಿಕೊಂಡು ಬಲಾತ್ಕಾರದಿಂದ ಎದುರಿಸುವವರಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಎದೋಮ್ಯರು, “ನೀವು ದಾಟಲೇ ಕೂಡದು,” ಎಂದು ಉತ್ತರಿಸಿದರು. ಮಾತ್ರವಲ್ಲ, ದೊಡ್ಡ ಪಡೆಯಾಗಿ ಕೂಡಿಕೊಂಡು ಅವರ ಮೇಲೆ ದಾಳಿಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅವನು, “ನೀವು ದಾಟಬಾರದು,” ಎಂದನು. ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:20
10 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ.


ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ನಿನ್ನ ದೇಶವನ್ನು ದಾಟಿಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದದರಿಂದ ಅವರು ಕಾದೇಶಿನಲ್ಲಿಯೇ ನಿಂತರು.


ನಾನು ಸಮಾಧಾನಪ್ರಿಯನು; ಅವರೋ, ಮಾತಾಡಿದರೆ ಯುದ್ಧಕ್ಕೆ ಬರುತ್ತಾರೆ.


ಆದರೆ ಸೀಹೋನನು ಅವರನ್ನು ನಂಬದವನಾಗಿ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.


ಆದರೆ ಎದೋಮ್ಯರು - ನಮ್ಮ ದೇಶವನ್ನು ನೀವು ದಾಟಿ ಹೋಗಕೂಡದು; ದಾಟುವದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ ಎಂದು ಉತ್ತರ ಕೊಟ್ಟರು.


ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು.


ಎದೋಮ್ಯರು ಇಸ್ರಾಯೇಲ್ಯರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವದಕ್ಕೆ ಅಪ್ಪಣೆಕೊಡದೆಹೋದದರಿಂದ ಇಸ್ರಾಯೇಲ್ಯರು ಅವರ ಕಡೆಯಿಂದ ತಿರುಗಿಕೊಂಡು [ಬೇರೊಂದು ಮಾರ್ಗವಾಗಿ] ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು