Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:6 - ಕನ್ನಡ ಸತ್ಯವೇದವು J.V. (BSI)

6 ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಲಿಗೆ ಹೋಗಿ ಅಡ್ಡಬೀಳಲಾಗಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಮತ್ತು ಆರೋನರು ಆ ಜನ ಸಂದಣಿಯನ್ನು ಬಿಟ್ಟು, ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಬಂದು ಸಾಷ್ಟಾಂಗವೆರಗಿದರು. ಆಗ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆ, ಆರೋನನೂ ಜನಸಮೂಹದ ಎದುರಿನಿಂದ ದೇವದರ್ಶನ ಗುಡಾರದ ಬಾಗಿಲಿನೊಳಗೆ ಹೋಗಿ, ಸಾಷ್ಟಾಂಗವೆರಗಿದರು. ಯೆಹೋವ ದೇವರ ಮಹಿಮೆಯು ಅವರಿಗೆ ಕಾಣಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:6
15 ತಿಳಿವುಗಳ ಹೋಲಿಕೆ  

ಆಗ ಮೋಶೆ ಆರೋನರು ಇಸ್ರಾಯೇಲ್ಯರ ಸರ್ವಸಮೂಹದವರ ಮುಂದೆ ಬೋರಲಬಿದ್ದರು.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಅದಲ್ಲದೆ ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಹೊಳೆಯಿತು.


ಮೋಶೆ ಆ ಮಾತನ್ನು ಕೇಳಿ ಅಡ್ಡಬಿದ್ದು ಕೋರಹನಿಗೂ ಅವನ ಎಲ್ಲಾ ಸಮೂಹದವರಿಗೂ -


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;


ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.


ಸಮೂಹದವರೆಲ್ಲರೂ ಹೀಗೆ ಮೋಶೆ ಆರೋನರಿಗೆ ವಿರೋಧವಾಗಿ ಕೂಡಿದ್ದಾಗ ದೇವದರ್ಶನದ ಗುಡಾರದ ಕಡೆಗೆ ನೋಡಲಾಗಿ ಆಹಾ, ಮೇಘವು ಅದನ್ನು ಮುಚ್ಚಿಕೊಂಡಿತು, ಮತ್ತು ಯೆಹೋವನ ತೇಜಸ್ಸು ಹೊಳೆಯಿತು.


ಆದರೆ ಜನಸಮೂಹದವರೆಲ್ಲರೂ [ಕೇಳಲೊಲ್ಲದೆ] ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರಲಾಗಿ ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಾಯೇಲ್ಯರೆಲ್ಲರಿಗೂ ಕಾಣಿಸಿತು.


ಆ ಮೂವರು ಬಂದಾಗ ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತು ಆರೋನ್ ವಿುರ್ಯಾಮರನ್ನು ಹತ್ತಿರಕ್ಕೆ ಕರೆದನು.


ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು.


ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಆಗ ಯೆಹೋವನು ಮೋಶೆಗೆ - ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರು ಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವದು; ನೀನು ಸಮೂಹದವರಿಗೂ ಅವರ ಪಶುಗಳಿಗೂ ನೀರನ್ನು ಕುಡಿಯಕೊಡಬಹುದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು