Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:2 - ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:2
15 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಯೆಹೋವನಿಗೆ - ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವದಾದರೆ


ಯಾಕೋಬನು ಅಲ್ಲಿ - ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು


ಯಾಕೋಬ್ಯರ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ


ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು