Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:7 - ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:7
30 ತಿಳಿವುಗಳ ಹೋಲಿಕೆ  

ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ -


ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು; ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಅದಕ್ಕೆ ಫರೋಹನು - ಒಳ್ಳೇದು, ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಮಾಡುವಂತೆ ನಿಮಗೆ ಅಪ್ಪಣೆ ಕೊಡುತ್ತೇನೆ; ಆದರೆ ದೂರ ಹೋಗಕೂಡದು; ನನಗೋಸ್ಕರ ಪ್ರಾರ್ಥನೆಮಾಡಿರಿ ಅಂದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.


ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.


ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದದರಿಂದ ನಾನು ಅವನಿಗೋಸ್ಕರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆನು.


ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


(ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಆತನು ಅವನ ಮೊರೆಯನ್ನು ಲಾಲಿಸಿ ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟ ಇಸ್ರಾಯೇಲ್ಯರ ಮೇಲೆ ಕಟಾಕ್ಷವಿಟ್ಟು


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.


ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು