Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:12 - ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:12
27 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


(ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.)


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು.


ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು; ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.


ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.


ಬಿಳಾಮನು ಬಾಲಾಕನಿಗೆ - ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಒಂದು ವೇಳೆ ಯೆಹೋವನು ನನಗೆ ದರ್ಶನ ಕೊಟ್ಟಾನು; ಆತನು ನನಗೆ ಸೂಚಿಸುವ ಸಂಗತಿಯನ್ನು ನಿನಗೆ ತಿಳಿಸುವೆನು ಎಂದು ಹೇಳಿ ಮರವಿಲ್ಲದ ಒಂದು ದಿನ್ನೆಗೆ ಹೋದನು.


ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.


ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತೆಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.


ಬೆಳಿಗ್ಗೆ ಬಿಳಾಮನು ಬಾಲಾಕನ ಪ್ರಧಾನರಿಗೆ - ನಾನು ನಿಮ್ಮ ಜೊತೆಯಲ್ಲಿ ಬರುವದಕ್ಕೆ ಯೆಹೋವನ ಅಪ್ಪಣೆಯಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ


ನಾನು ಅವರನ್ನು ಏನೆಂದು ಶಪಿಸಲಿ; ದೇವರು ಶಪಿಸಲಿಲ್ಲವಲ್ಲಾ. ಏನೆಂದು ಆಕ್ರೋಶಿಸಲಿ; ಯೆಹೋವನು ಆಕ್ರೋಶಿಸಲಿಲ್ಲವಲ್ಲಾ.


ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.


ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವದಿಲ್ಲ.


ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವದು.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು