Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:5 - ಕನ್ನಡ ಸತ್ಯವೇದವು J.V. (BSI)

5 ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಾಲಾಕನು ಬೆಯೋರನ ಮಗ ಬಿಳಾಮನನ್ನು ಕರೆಸುವುದಕ್ಕೆ ಸ್ವಜನರ ನಾಡಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ‘ಪೆತೋರ್’ ಎಂಬ ಊರಿಗೆ ದೂತರನ್ನು ಕಳಿಸಿದನು. “ತಾವು ದಯವಿಟ್ಟು ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನನಗೆದುರಾಗಿ ಬಂದಿಳಿದಿದೆ. ಅವರು ನಮಗಿಂತ ಬಲಿಷ್ಠರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:5
15 ತಿಳಿವುಗಳ ಹೋಲಿಕೆ  

ಯಾಕಂದರೆ ನೀವು ಐಗುಪ್ತದೇಶದಿಂದ ಬಂದಾಗ [ಅಮ್ಮೋನಿಯರು] ಅನ್ನ ಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; [ಮೋವಾಬ್ಯರು] ನಿಮ್ಮನ್ನು ಶಪಿಸುವದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣ ಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾವಿುನ ಪೆತೋರೂರಿನಿಂದ ಅವನನ್ನು ಕರಿಸಿದರು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲ್ಯರಾದ ನಿಮಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ದು ನಿಮ್ಮನ್ನು ಶಪಿಸುವದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೇಕಳುಹಿಸಿದನು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನೂ ಆಗಿದ್ದ ಬಿಳಾಮನೂ ಇದ್ದನು.


ಆಗ ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನು ನನ್ನನ್ನು ಅರಾವಿುನಿಂದ ಕರಿಸಿದನು; ಮೋವಾಬ್ಯರ ಅರಸನು ಮೂಡಲಬೆಟ್ಟಗಳಿಂದ ನನ್ನನ್ನು ಬರಮಾಡಿದನು. ನೀನು ಬಂದು ಯಾಕೋಬವಂಶದವರನ್ನು ನನಗೋಸ್ಕರ ಶಪಿಸಬೇಕು; ಇಸ್ರಾಯೇಲ್ಯರಿಗೆ ದುರ್ಗತಿಯುಂಟಾಗಲಿ ಎಂದು ಆಕ್ರೋಶಿಸಬೇಕು ಎಂದು ನನಗೆ ಹೇಳಿದನು.


ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ಅವು ಭೂವಿುಯನ್ನೆಲ್ಲಾ ಮುಚ್ಚಿಕೊಂಡದ್ದರಿಂದ ನೆಲವು ಕಾಣದೆಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ ಅಡವಿಯ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


(ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು