Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:6 - ಕನ್ನಡ ಸತ್ಯವೇದವು J.V. (BSI)

6 ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:6
23 ತಿಳಿವುಗಳ ಹೋಲಿಕೆ  

ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಯಾಕಂದರೆ ಅವರು ಇಸ್ರಾಯೇಲ್ಯರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಅಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವದಾಗಿ ಕಂಡು ಬಂತು.


ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ನೀನು ಕೋಲುಹಿಡಿದು ನನ್ನ ಬಳಿಗೆ ಬರುವದೇನು? ನಾನು ನಾಯಿಯೋ ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ -


ಯಾಕಂದರೆ ನೀವು ಐಗುಪ್ತದೇಶದಿಂದ ಬಂದಾಗ [ಅಮ್ಮೋನಿಯರು] ಅನ್ನ ಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; [ಮೋವಾಬ್ಯರು] ನಿಮ್ಮನ್ನು ಶಪಿಸುವದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣ ಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾವಿುನ ಪೆತೋರೂರಿನಿಂದ ಅವನನ್ನು ಕರಿಸಿದರು.


ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು.


ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ನಿವಿುತ್ತವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.


ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲ್ಯರಾದ ನಿಮಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ದು ನಿಮ್ಮನ್ನು ಶಪಿಸುವದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೇಕಳುಹಿಸಿದನು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಆಗ ಬಾಲಾಕನು - ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು; ಆದರೆ ಅವರೆಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವದು;


ತರುವಾಯ ಬಾಲಾಕನು ಬಿಳಾಮನಿಗೆ - ಬೇರೊಂದು ಸ್ಥಳಕ್ಕೆ ನಿನ್ನನ್ನು ಕರಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವದಕ್ಕೆ ಒಂದು ವೇಳೆ ದೇವರು ಅನುಮತಿಸಾನು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು