Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:19 - ಕನ್ನಡ ಸತ್ಯವೇದವು J.V. (BSI)

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:19
36 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿ ಹೇಳಿದ್ದೇನೆ; ಅದರ ವಿಷಯದಲ್ಲಿ ದಾವೀದನಿಗೆ ಸುಳ್ಳುಗಾರನಾಗುವದಿಲ್ಲ. ಅದೇನಂದರೆ -


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು; ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾವಿು, ನಾನು ರೋಷದಿಂದ ಬಾರೆನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿದಿ. ದೇವರೇ, ಯೆಹೋವನೇ, ನೀನು ನನ್ನನ್ನು ಕುಲೀನನನ್ನೋ ಎಂಬಂತೆ ಕಟಾಕ್ಷಿಸಿದ್ದೀ.


ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;


ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?


ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಇದು ಯೆಹೋವನೆಂಬ ನಾನೇ ಹೇಳಿದ ಮಾತು; ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಲೇ ಮಾಡುತ್ತೇನೆ; ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು ಎಂದು ಹೇಳಿದನು.


ಬಾಲಾಕನು - ಯೆಹೋವನು ಏನು ಹೇಳಿದ್ದಾನೆ ಎಂದು ಅವನನ್ನು ಕೇಳಲು ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನೇ, ಕಿವಿಗೊಟ್ಟು ಕೇಳು; ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.


ನನ್ನ ಒಡಂಬಡಿಕೆಯನ್ನು ಭಂಗಪಡಿಸುವದಿಲ್ಲ; ನನ್ನ ಮಾತನ್ನು ಬದಲಿಸುವದಿಲ್ಲ.


ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಬಿಲ್ಲುಗಾರರಲ್ಲಿ ಉಳಿದವರೂ ಕೇದಾರಿನವರ ಶೂರರೂ ವಿರಳರಾಗುವರು; ಇಸ್ರಾಯೇಲ್ಯರ ದೇವರಾದ ಯೆಹೋವನು ಇದನ್ನು ನುಡಿದಿದ್ದಾನೆ ಎಂಬದೇ.


ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಹುಲ್ಲು ಒಣಗಿಹೋಗುವದು, ಹೂವು ಬಾಡಿಹೋಗುವದು, ನಮ್ಮ ದೇವರ ಮಾತೋ ಸದಾಕಾಲವೂ ಇರುವದು ಎಂದು ಉತ್ತರವಾಯಿತು.


ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಆತನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲಾ ನೆರವೇರಿದವು.


ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.


ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ. ಇದು ಯೆಹೋವನ ಮಾತು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು