Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:22 - ಕನ್ನಡ ಸತ್ಯವೇದವು J.V. (BSI)

22 ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡುಕೋಣದಷ್ಟು ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡು ಕೋಣದಂತೆ ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:22
14 ತಿಳಿವುಗಳ ಹೋಲಿಕೆ  

ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು.


ಸಿಂಹಗಳ ಬಾಯಿಂದಲೂ ಕಾಡುಕೋಣಗಳ ಕೊಂಬುಗಳಿಂದಲೂ ನನ್ನನ್ನು ತಪ್ಪಿಸು. ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲ್ಯರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು.


ನಾನು ಫರೋಹನಲ್ಲಿಯೂ ಅವನ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಹೊಂದಿದ ನಂತರ ನಾನು ಯೆಹೋವನು ಎಂಬದನ್ನು ಐಗುಪ್ತ್ಯರು ತಿಳುಕೊಳ್ಳುವರು ಅಂದನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿಬಿಟ್ಟದ್ದನ್ನೂ ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಿರ್ಮೂಲ ಮಾಡಿದ್ದನ್ನೂ ಕೇಳಿ


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಹೋರಿಗೂಳಿಗಳೂ ಬರುವವು; ಆ ದೇಶವು ರಕ್ತದಿಂದ ನೆನೆಯುವದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗುವದು.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು