Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:20 - ಕನ್ನಡ ಸತ್ಯವೇದವು J.V. (BSI)

20 ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ; ಆದರೂ ನಾಶವೇ ಅವರ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಹೀಗೆಂದು ನುಡಿದನು: “ಅಮಾಲೇಕ್ಯರು ಶ್ರೇಷ್ಠರಲ್ಲವೆ ರಾಷ್ಟ್ರಗಳಲ್ಲಿ? ಆದರೂ ಅವರ ಗತಿ ವಿನಾಶವೇ ಸರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:20
18 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್‍ಕೋಟೆಯಲ್ಲಿ ಪ್ರಕಟವಾಯಿತು. ಮತ್ತು ಹಾಮಾನನ ಹತ್ತು ಮಂದಿ ಮಕ್ಕಳನ್ನು ಗಲ್ಲಿಗೆ ಹಾಕಿದರು.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.


ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.


ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ


ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು.


ಆಗ ಅಮಾಲೇಕ್ಯರು ರೆಫೀದೀವಿುನಲ್ಲಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡುವದಕ್ಕೆ ಬರಲು


ತಿಮ್ನ ಎಂಬವಳು ಏಸಾವನ ಮಗನಾದ ಏಲೀಫಜನಿಗೆ ಉಪಪತ್ನಿಯಾಗಿದ್ದು ಅವನಿಗೆ ಅಮಾಲೇಕನನ್ನು ಹೆತ್ತಳು ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಸಾಲಿನವರು.


ಅವರ ಕಪಿಲೆಗಳಿಂದ ನೀರು ಹರಿಯುತ್ತಲೇ ಇದೆ; ಅವರ ಬಿತ್ತನೆಗೆ ಬೇಕಾದಷ್ಟು ನೀರಿದೆ. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು; ಅವರ ರಾಜ್ಯವು ಅಭಿವೃದ್ಧಿಯಲ್ಲಿರುವದು.


ಇಸ್ರಾಯೇಲ್ಯರೋ ಬಲಗೊಂಡವರು; ಯಾಕೋಬ್ಯರಿಗೇ ದೊರೆತನವಾಯಿತು; ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು ಅಂದನು.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ಸೇನಾಧೀಶ್ವರನಾದ ಯೆಹೋವನು ನಿನಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು