Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:8 - ಕನ್ನಡ ಸತ್ಯವೇದವು J.V. (BSI)

8 ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:8
18 ತಿಳಿವುಗಳ ಹೋಲಿಕೆ  

ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜವಿರೋಧಿಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.


ಆ ಜನಾಂಗದವರು ಪ್ರಾಯದ ಸಿಂಹದಂತೆ ಎದ್ದು ಮೃಗೇಂದ್ರನಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ರಕ್ತವನ್ನು ಕುಡಿದು ಮಾಂಸವನ್ನು ತಿಂದು ತೃಪ್ತಿಹೊಂದಿದ ಹೊರತು ಮಲಗುವದಿಲ್ಲವಷ್ಟೆ ಅಂದನು.


ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡುಕೋಣದಷ್ಟು ಬಲವುಳ್ಳವರು.


ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಬಡಗಲಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬೆಲಿಗೆ ವಿರುದ್ಧವಾಗಿ ವ್ಯೂಹ ಕಟ್ಟಿ ಅದನ್ನು ಸ್ಥಳದೊಳಗಿಂದ ಕಿತ್ತುಬಿಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣ ಶೂರನಂತಿರುವವು.


ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ ಬೆಳಗಿನ ತನಕ ತಡಕೊಂಡೇ ಇದ್ದೆನು. ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರುಹೊರಿಸಿದವರನ್ನು ತಂದು ಅವರನ್ನೂ ಅವರ ಹೆಂಡತಿಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು; ಅವರು ಗವಿಯ ಅಡಿಯನ್ನು ಮುಟ್ಟುವದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ ಅವರ ಮುಖಗಳ ಮೇಲೆ ಎಸೆದು ಅವರು ಬೆನ್ನು ತೋರಿಸಿ ಓಡಿಹೋಗುವಂತೆ ಮಾಡುವಿ.


ನನ್ನ ಬಾಣಗಳು ರಕ್ತವನ್ನು ಕುಡಿಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚಂಡಾಡುವದು ಎಂಬದೇ.


ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಹೆರೋದನು ತೀರಿಹೋಗುವ ತನಕ ಅಲ್ಲೇ ಇದ್ದನು. ಇದರಿಂದ - ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.


ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿಬಿಟ್ಟದ್ದನ್ನೂ ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಿರ್ಮೂಲ ಮಾಡಿದ್ದನ್ನೂ ಕೇಳಿ


ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು