Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:9 - ಕನ್ನಡ ಸತ್ಯವೇದವು J.V. (BSI)

9 ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:9
21 ತಿಳಿವುಗಳ ಹೋಲಿಕೆ  

ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು?


ಆ ಜನಾಂಗದವರು ಪ್ರಾಯದ ಸಿಂಹದಂತೆ ಎದ್ದು ಮೃಗೇಂದ್ರನಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ರಕ್ತವನ್ನು ಕುಡಿದು ಮಾಂಸವನ್ನು ತಿಂದು ತೃಪ್ತಿಹೊಂದಿದ ಹೊರತು ಮಲಗುವದಿಲ್ಲವಷ್ಟೆ ಅಂದನು.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅವನು - ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು.


ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆಯು ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?


ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.


ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ - ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದಿಯಲ್ಲಾ.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.


ಆರು ಮೆಟ್ಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.


ಅದಕ್ಕೆ ಹೊಂದಿಕೆಯಾಗಿ ಆರು ಮೆಟ್ಲುಗಳೂ ಬಂಗಾರದ ಪಾದಪೀಠವೂ ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.


ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು. ಆಗ ಅವನ ಪಂಡಿತರೂ ಹೆಂಡತಿಯೂ ಅವನಿಗೆ - ಯಾವನ ಮುಂದೆ ನಿನ್ನ ಪತನವು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು