Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:65 - ಕನ್ನಡ ಸತ್ಯವೇದವು J.V. (BSI)

65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:65
20 ತಿಳಿವುಗಳ ಹೋಲಿಕೆ  

ಅವರಲ್ಲಿ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಇದು ಯೆಹೋವನೆಂಬ ನಾನೇ ಹೇಳಿದ ಮಾತು; ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಲೇ ಮಾಡುತ್ತೇನೆ; ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು ಎಂದು ಹೇಳಿದನು.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ಇಸ್ರಾಯೇಲ್ಯರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರೂ ಮಕ್ಕಳೂ ಅಲ್ಲದೆ ಅವರ ಕಾಲ್ಬಲವೇ ಸುಮಾರು ಆರು ಲಕ್ಷ ಗಂಡಸರು.


ಯೆಹೋವನು ಮೋಶೆ ಆರೋನರಿಗೆ - ನನಗೆ ವಿರೋಧವಾಗಿ ಗುಣುಗುಟ್ಟುವ ಈ ದುಷ್ಟಸಮೂಹದವರನ್ನು ನಾನು ಎಷ್ಟು ದಿನ ಸಹಿಸಲಿ. ಇಸ್ರಾಯೇಲ್ಯರು ನನಗೆ ವಿರೋಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ; ನಿಮ್ಮೆಲ್ಲರ ಶವಗಳು ಈ ಅರಣ್ಯದಲ್ಲಿ ಬೀಳುವ ಪರ್ಯಂತರ


ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ.


ನೀವು ಆಯಾ ಕುಲಗಳಿಂದ ನೇವಿುಸಬೇಕಾದವರು ಯಾರಂದರೆ - ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನೆಂದು ಹೇಳಿದನು.


ಯೆಹೋಶುವನು ಸುನ್ನತಿಮಾಡಿದ್ದಕ್ಕೆ ಕಾರಣವೇನಂದರೆ - ಐಗುಪ್ತದಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲಾ ಆ ದೇಶವನ್ನು ಬಿಟ್ಟನಂತರ ಅರಣ್ಯದಲ್ಲಿ ಸತ್ತುಹೋದರು.


ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು