Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:1
17 ತಿಳಿವುಗಳ ಹೋಲಿಕೆ  

ಅವನ ಮೇಲೆ ಕೈಯಿಟ್ಟು ಅಧಿಕಾರವನ್ನು ಕೊಟ್ಟನು.


ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.


ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಸಮರ್ಪಿಸಿದನು.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ.


ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇವಿುಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗೋಸ್ಕರ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇವಿುಸಿದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆ ಮಾಡುವದೇ ಅವರ ಕರ್ತವ್ಯ.


ಇದಲ್ಲದೆ ಅವನು ಯೆಹೋವನ ಧರ್ಮಶಾಸ್ತ್ರವಿಧಿಗನುಸಾರವಾಗಿ ಪ್ರಾತಃಕಾಲ ಸಾಯಂಕಾಲ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗೋಸ್ಕರ ಆಗಬೇಕಾದದ್ದೆಲ್ಲಾ ತನ್ನ ಆಸ್ತಿಯಿಂದ ಸಲ್ಲಿಸಬೇಕೆಂತಲೂ


ಪರಲೋಕ ದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ ಟಗರು ಕುರಿಮರಿಗಳನ್ನೂ ಗೋದಿ ಉಪ್ಪೂ ದ್ರಾಕ್ಷಾರಸ ಎಣ್ಣೆ ಇವುಗಳನ್ನೂ ಯೆರೂಸಲೇವಿುನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕೆಂಬದಾಗಿಯೂ ಆಜ್ಞಾಪಿಸುತ್ತೇನೆ.


ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;


ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ.


ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


[ಪ್ರಭುವು] ಉತ್ಸವಗಳಲ್ಲಿಯೂ ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ನೀವು ಆಯಾ ದಿನಗಳನ್ನೂ ಮಾಸಗಳನ್ನೂ ಉತ್ಸವಕಾಲಗಳನ್ನೂ ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸುತ್ತೀರಿ.


ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು