Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:11 - ಕನ್ನಡ ಸತ್ಯವೇದವು J.V. (BSI)

11 ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:11
32 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.


ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ ಆರು ಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅದು ಪೂರ್ಣಾಂಗವಾಗಿಯೇ ಇರಬೇಕು;


ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಅಂದಿನಿಂದ ನಿತ್ಯಸರ್ವಾಂಗಹೋಮವೂ ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ ಜನರು ಸ್ವೇಚ್ಫೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ.


ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ.


ನೀವು ಆಯಾ ದಿನಗಳನ್ನೂ ಮಾಸಗಳನ್ನೂ ಉತ್ಸವಕಾಲಗಳನ್ನೂ ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸುತ್ತೀರಿ.


ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವದೋ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಹಾರುವದೋ?


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.


ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;


ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು.


ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಗಳನ್ನೂ ಸಮರ್ಪಿಸಬೇಕು; ಈ ಪಶುಗಳು ಪೂರ್ಣಾಂಗವಾಗಿಯೇ ಇರಬೇಕು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ.


ಇದು ಇಸ್ರಾಯೇಲ್ಯರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು