Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:14 - ಕನ್ನಡ ಸತ್ಯವೇದವು J.V. (BSI)

14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:14
11 ತಿಳಿವುಗಳ ಹೋಲಿಕೆ  

ಟಗರಿಗೆ ಆರು ಸೇರೂ ಕುರಿಯೊಂದಕ್ಕೆ ಮೂರು ಸೇರೂ ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿರುವದು.


ಮತ್ತು ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಯೆಹೋವನಿಗೆ ಸಮರ್ಪಿಸಬೇಕು. ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯವನ್ನೂ ಸಮರ್ಪಿಸುವದಲ್ಲದೆ [ಅಮಾವಾಸ್ಯೆಯಲ್ಲಿ] ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.


ನೀವು ತರುವಂಥದು ಹೋರಿಯಾಗುವ ಪಕ್ಷಕ್ಕೆ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ


ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ;


ಅಂದಿನಿಂದ ನಿತ್ಯಸರ್ವಾಂಗಹೋಮವೂ ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ ಜನರು ಸ್ವೇಚ್ಫೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲ ಮಾಡುವೆನು. ಇದು ಯೆಹೋವನ ನುಡಿ.


ಸಬ್ಬತ್‍ದಿನದಲ್ಲಿ ಪ್ರಭುವು ಯೆಹೋವನಿಗೆ ಪೂರ್ಣಾಂಗವಾದ ಆರು ಕುರಿಗಳನ್ನೂ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು;


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು