Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:8 - ಕನ್ನಡ ಸತ್ಯವೇದವು J.V. (BSI)

8 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:8
6 ತಿಳಿವುಗಳ ಹೋಲಿಕೆ  

ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮವು, ಅದಕ್ಕೆ ಸೇರಿದ ಪಾನದ್ರವ್ಯವು ಇವುಗಳನ್ನಲ್ಲದೆ ನೀವು ಸಬ್ಬತ್‍ದಿನದಲ್ಲಿ ಹೆಚ್ಚಾಗಿ ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಗೋದಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.


ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಸಂದುಗಳಲ್ಲಿ ಹರಿಯಬೇಕು, ಆದರೆ ರೆಕ್ಕೆಗಳನ್ನು ಪೂರಾ ಕಿತ್ತು ಹಾಕಕೂಡದು. ಅನಂತರ ಅವನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು