Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:6 - ಕನ್ನಡ ಸತ್ಯವೇದವು J.V. (BSI)

6 ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:6
14 ತಿಳಿವುಗಳ ಹೋಲಿಕೆ  

ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ಸರ್ವಾಂಗಹೋಮಗಳನ್ನರ್ಪಿಸಿದರು.


ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ;


ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ;


ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ವರುಷದ ಏಳು ಕುರಿ ಇವುಗಳನ್ನೂ;


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.


ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಪಾನದ್ರವ್ಯಕ್ಕಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು