Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:7 - ಕನ್ನಡ ಸತ್ಯವೇದವು J.V. (BSI)

7 ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ದೇವದರ್ಶನದ ಗುಡಾರದ ಬಳಿಯಲ್ಲಿರಬೇಕು; ಆರೋನನಿಗೂ ಇಡೀ ಸಮಾಜಕ್ಕೂ ನೆರವಾಗಿ ದೇವಸ್ಥಾನದ ಪರಿಚರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:7
13 ತಿಳಿವುಗಳ ಹೋಲಿಕೆ  

ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಅದು ಮೊದಲುಗೊಂಡು ಅವರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.


ಲೇವಿಯರು ಯೆಹೋವನ ಪರಿಚರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ಯರ ನಿವಿುತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.


ಶೆಲೋಮೋತನೂ ಅವನ ಸಹೋದರರೂ ಪ್ರತಿಷ್ಠಿತವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರಬಂಧುಗಳು.


ಯೆಹೀಯೇಲ್ಯರಾದ ಜೇತಾಮನೂ ಯೋವೇಲನೆಂಬ ಅವನ ತಮ್ಮನೂ ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.


ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -


ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು.


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನರಿಗೆ ಅಧ್ಯಕ್ಷನಾಗಿ ದೇವಸ್ಥಾನವನ್ನು ಕಾಯುವವರ ಮೇಲ್ವಿಚಾರಕನಾಗಿರಬೇಕು.


ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.


ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು