Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:8 - ಕನ್ನಡ ಸತ್ಯವೇದವು J.V. (BSI)

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವದರ್ಶನದ ಗುಡಾರಕ್ಕೆ ಸೇರಿದ ಉಪಕರಣಗಳನ್ನು ನೋಡಿಕೊಳ್ಳಬೇಕು. ಇಸ್ರಯೇಲರ ಪರವಾಗಿ ದೇವಸ್ಥಾನದ ಸೇವಾಕಾರ್ಯಗಳನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:8
13 ತಿಳಿವುಗಳ ಹೋಲಿಕೆ  

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ವಿುಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಕೈ ಕೆಳಗೆ ಅದನ್ನು ನಡಿಸಬೇಕು.


ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.


ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸಬೇಕು; ಇಸ್ರಾಯೇಲ್ಯರಲ್ಲಿ ಆರೋನನಿಗೆ ಸಂಪೂರ್ಣವಾಗಿ ವಶಮಾಡಲ್ಪಟ್ಟವರು ಇವರೇ.


ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯೆಹೋವನು ತನ್ನನ್ನು ಆರಾಧಿಸುವದಕ್ಕೂ ಧೂಪಹಾಕುವದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡನಲ್ಲಾ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು