Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:16 - ಕನ್ನಡ ಸತ್ಯವೇದವು J.V. (BSI)

16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಹಾಯಾಜಕ ಆರೋನನ ಮಗ ಎಲ್ಲಾಜಾರನು ದೀಪದ ಎಣ್ಣೆಯನ್ನು, ಪರಿಮಳ ಧೂಪವನ್ನು, ಅನುದಿನ ನೈವೇದ್ಯ ಮಾಡುವ ಧಾನ್ಯದ್ರವ್ಯಗಳನ್ನು ಹಾಗೂ ಅಭಿಷೇಕ ತೈಲವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಬೇಕು. ದೇವದರ್ಶನದ ಗುಡಾರದ ಎಲ್ಲ ಭಾಗಗಳು, ಅದರಲ್ಲಿರುವ ಸಮಸ್ತ ವಸ್ತುಗಳು ಪಾತ್ರೆಪರಿಕರಗಳು ಹಾಗೂ ಅವುಗಳಲ್ಲಿರುವುದೆಲ್ಲವೂ ಅವನ ಮೇಲ್ವಿಚಾರಣೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಮಹಾಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರ ಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:16
20 ತಿಳಿವುಗಳ ಹೋಲಿಕೆ  

ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ


ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವದಕ್ಕಾಗಿ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;


ಜನರು ನಮ್ಮನ್ನು ಕ್ರಿಸ್ತನ ಕೈಕೆಳಗಿನವರೆಂತಲೂ ದೇವರು ತಿಳಿಸಿರುವ ಸತ್ಯಾರ್ಥಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಬೇಕು.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನರಿಗೆ ಅಧ್ಯಕ್ಷನಾಗಿ ದೇವಸ್ಥಾನವನ್ನು ಕಾಯುವವರ ಮೇಲ್ವಿಚಾರಕನಾಗಿರಬೇಕು.


ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯಕ್ರಮ ಹೇಗಂದರೆ - ಅವರು ನಿತ್ಯವೂ ಮೂರು ಸೇರು ಗೋದಿ ಹಿಟ್ಟನ್ನು, ಹೊತ್ತಾರೆ ಅರ್ಧವನ್ನೂ ಸಾಯಂಕಾಲ ಅರ್ಧವನ್ನೂ ಸಮರ್ಪಿಸಬೇಕು.


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.


ಪಟ್ಟಾಭಿಷೇಕತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಅದಲ್ಲದೆ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು