Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:15 - ಕನ್ನಡ ಸತ್ಯವೇದವು J.V. (BSI)

15 ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು. ಮತ್ತು ಅವಳ ಸಂಗತಿಯನ್ನು ವಿಚಾರಿಸುವದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರಸಂಶಯವನ್ನು ಸೂಚಿಸುವದಕ್ಕೂ ಪಾಪವನ್ನು ಹೊರಪಡಿಸುವದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:15
9 ತಿಳಿವುಗಳ ಹೋಲಿಕೆ  

ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.


ಆದರೆ ಆ ಯಜ್ಞಗಳಿಂದ ಪ್ರತಿವರುಷದಲ್ಲಿಯೂ ಪಾಪಗಳ ಜ್ಞಾಪಕವಾಗುವದುಂಟು;


ನಾನು ಹದಿನೈದು ರೂಪಾಯಿಯನ್ನೂ ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡು ಅವಳಿಗೆ -


ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ಯಾಜಕನು ಅವಳನ್ನು ಕರೆದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು.


ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬೈಲಿಗೆ ತರಲು [ಅವನ ಕೈಗೆ] ಸಿಕ್ಕಿಬೀಳುವರು.


ಆಜ್ಞಾಪಿಸಬೇಕಾದದ್ದೇನಂದರೆ - ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅದನ್ನು ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ತೆಗೆದುಕೊಂಡು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು